ಹಾಸನ: ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಆತನ ಸ್ನೇಹಿತರೇ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಹಾಸನದ ಬಿ.ಕಾಟೀಹಳ್ಳಿಯ ನಿವಾಸಿ ಸತ್ಯ ಅಲಿಯಾಸ್ ಸ್ಪಾಟ್ ಸತ್ಯ ಹಲ್ಲೆಗೊಳಗಾದ ಯುವಕ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತನ್ನ ಮೂವರು ಸ್ನೇಹಿತರೊಂದಿಗೆ ಬೈರಾಪುರ ಬಳಿಯಿರುವ ಬಾರ್ನಲ್ಲಿ ಪಾರ್ಟಿ ಮಾಡಿದ್ದ ಸತ್ಯನೊಂದಿಗೆ ಆತನ ಸ್ನೇಹಿತರು ಕ್ಷುಲ್ಲಕ ಕಾರಣಕ್ಕಾಗಿ ಜಗಳ ತೆಗೆದಿದ್ದಾರೆ. ನಂತರ ರಸ್ತೆಯಲ್ಲಿಯೇ ಸತ್ಯನಿಗೆ ಬಾಟಲ್, ಕಾರಿನ ಜಾಕ್ ಲಿವರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭೀಭತ್ಸ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತ್ಯನನ್ನು ಸ್ಥಳೀಯರು ಗೂಡ್ಸ್ ಆಟೋದಲ್ಲಿ ಹಾಕಿ ಆಸ್ಪತ್ರಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಆಲೂರು ಪೊಲೀರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಆರಂಭಿಸಿದ್ದಾರೆ