ಹಾಸನ: ಬೇಲೂರು ತಾಲೂಕಿನ ಕರಗಡ ಗ್ರಾಮದಲ್ಲಿ ಕಿಡಿಗೇಡಿಗಳು ವೈಯಕ್ತಿಕ ದ್ವೇಷದಿಂದ ರೈತನೊಬ್ಬನ ಕಷ್ಟದಿಂದ ಬೆಳೆದಿದ್ದ ಅಡಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ.
ರೈತ ಜಯಣ್ಣ ಎಂಬುವವರ ಜಮೀನಿನಲ್ಲಿ ಸುಮಾರು 70ಕ್ಕೂ ಹೆಚ್ಚು 4.5 ವರ್ಷದ ಹೊಂಬಾಳೆ ಬಿಟ್ಟಿದ್ದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ.ತಮ್ಮ ಬದುಕಿನ ಆಧಾರವಾಗಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡ ಜಯಣ್ಣ ಕಂಗಾಲಾಗಿದ್ದಾರೆ.
“ಕಷ್ಟಪಟ್ಟು ಗಿಡಗಳನ್ನು ಬೆಳೆಸಿದ್ದೆ, ಇದೀಗ ಎಲ್ಲವೂ ನಾಶವಾಯಿತು,” ಎಂದು ಅವರು ಕಣ್ಣೀರಿಟ್ಟಿದ್ದಾರೆ. ಘಟನೆಯ ಸ್ಥಳಕ್ಕೆ ಬೇಲೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.