ತೆರೆಯಿತು ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು; ಉರಿಯುತ್ತಲೇ‌ ಇತ್ತು ನಂದಾದೀಪ

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ನಗರದಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಿತು.

ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಧ್ಯಾಹ್ನ 12.10 ಕ್ಕೆ ವಿಧ್ಯುಕ್ತವಾಗಿ ಗರ್ಭಗುಡಿ ಬಾಗಿಲು ತೆರೆಯಲಾಯಿತು. ದೇವಿಯ ಪವಾಡವೆಂದು ನಂಬಲಾಗುವ ಗರ್ಭಗುಡಿಯೊಳಗಿನ ನಂದಾದೀಪ ಉರಿಯುತ್ತಲೇ ಇತ್ತು.

ತಳವಾರ ವಂಶಸ್ಥ ನರಸಿಂಗರಾಜು ಬಾಳೆಕಂಬ ಕತ್ತರಿಸುತ್ತಿದ್ದಂತೆಯೇ ಗರ್ಭಗುಡಿ ಬಾಗಿಲು ತೆರೆಯಲಾಯಿತು.

ಈ ವೇಳೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗೇಶ್ವರ ಸ್ವಾಮೀಜಿ, ಶಂಭುನಾಥ ಸ್ವಾಮೀಜಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಶ್ರೇಯಸ್ ಪಟೇಲ್. ಶಾಸಕರಾದ ಹೆಚ್.ಪಿ.ಸ್ವರೂಪ್ ಪ್ರಕಾಶ್,  ಕೆ.ಎಂ.ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೇರಿದಂತೆ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಹಾಜರಿದ್ದರು. ಈ ವೇಳೆ ಹಾಜರಿದ್ದ ಭಕ್ತರು, ದೇವಿಗೆ ಜಯಗೋಷ ಮೊಳಗಿಸಿ ಕಾಪಾಡು ತಾಯೆ ಎಂದು ಪ್ರಾರ್ಥಿಸಿದರು