ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತೆ ಗುತ್ತಿಗೆದಾರನಿಂದ ಲಂಚ ವಸೂಲಿ; ನಗರಸಭೆ ಆಯುಕ್ತ, ಎಇಇ ಲೋಕಾಯುಕ್ತ ಬಲೆಗೆ

ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ
ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಮೊದಲೆ ಹೆಣೆದಿದ್ದ ಬಲೆಯಂತೆ ಅಧಿಕಾರಿಗಳು ಇಂದು ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಲಂಚದ ಹಣದ ಸಮೇತ ವಶಕ್ಕೆ ಪಡೆಯಲಾಯಿತು.